ಭಾನುವಾರ, ನವೆಂಬರ್ 4, 2012

ವಿವೇಕಾನಂದ ನುಡಿಮುತ್ತುಗಳು

ಸ್ವೀಕರಿಸುವ ಮನಸಿದ್ದರೆ ಸದ್ಗುಣಗಳನ್ನು ಸ್ವೀಕರಿಸು
ಈಜುವ ಮನಸಿದ್ದರೆ ಜ್ಞಾನ ಸಾಗರದಲ್ಲಿ ಈಜು
ನಡೆಯುವ ಮನಸಿದ್ದರೆ ಸನ್ಮಾರ್ಗದಲ್ಲಿ ನಡೆ
ಮಾತನಾಡುವುದಿದ್ದರೆ ಸತ್ಯವನ್ನೇ ಮಾತನಾಡು
ಹಾಡುವುದಿದ್ದರೆ ಅನುಭವದ ಮಾತುಗಳನ್ನೇ ಹಾಡು
ಕೇಳುವುದಿದ್ದರೆ ಸದುಪದೇಶಗಳನ್ನು ಕೇಳು
ದೊರಕಿಸುವುದಿದ್ದರೆ ಜಯವನ್ನೇ ದೊರಕಿಸು
ನುಂಗುವ ಇಚ್ಚೆಯಿದ್ದರೆ ಸಿಟ್ಟನ್ನೇ ನುಂಗು


ಭಾರತೀಯರಲ್ಲಿ ದೊಡ್ಡದೊಂದು ದೋಷವಿದೆ.ನಾವು ಒಂದು ಸ್ಥಿರವಾದ ಸಂಸ್ಥೆಯನ್ನು ಕಟ್ಟಲಾರೆವು. ಕಾರಣವೇನೆಂದರೆ ಅಧಿಕಾರವನ್ನು ಇತರರೊಂದಿಗೆ ಹಂಚಿಕೊಳ್ಳುವುದು ನಮಗೆ ಇಷ್ಟವಿಲ್ಲ. ನಾವು ಕಾಲವಾದ ಮೇಲೆ ಇದರ ಗತಿ ಏನೆಂಬುದನ್ನು ಕುರಿತು ಚಿಂತಿಸುವುದೇ ಇಲ್ಲ.
- ಸ್ವಾಮಿ ವಿವೇಕಾನಂದ


ವಿಕಾಸವೇ ಜೀವನ;ಸಂಕೋಚವೇ ಮರಣ. ಪ್ರೇಮವೆಲ್ಲಾ ವಿಕಾಸ,ಸ್ವಾರ್ಥವೆಲ್ಲಾ ಸಂಕೋಚ. ಆದ್ದರಿಂದ ಪ್ರೇಮವೇ ಬದುಕಿನ ಧರ್ಮ.
- ಸ್ವಾಮಿ ವಿವೇಕಾನಂದ


ಶಿಕ್ಷಣವೆಂದರೆ ಮೊದಲೇ ಮನುಷ್ಯನಲ್ಲಿ ಇರುವ ಪರಿಪೂರ್ಣತೆಯನ್ನು ಪ್ರಕಾಶಪಡಿಸುವುದು.
- ಸ್ವಾಮಿ ವಿವೇಕಾನಂದ


ನೀವು ಯಾವುದೇ ಕೆಲಸವನ್ನು ಮಾಡುವಾಗಲೂ ನಿಮ್ಮ ಮನಸ್ಸು ಹೃದಯ, ನಿಮ್ಮ ಸರ್ವಸ್ವವನ್ನೂ ಆಕೆಲಸಕ್ಕೆ ಕೊಡಿ. ನಾನೊಮ್ಮೆ ಒಬ್ಬ ಸಾಧು ಮಹಾತ್ಮನನ್ನು ನೋಡಿದ್ದೆ. ಆತ ಪೂಜೆ, ಧ್ಯಾನಗಳನ್ನು ಎಷ್ಟು ಏಕಾಗ್ರತೆ ಶ್ರದ್ಧೆಗಳಿಂದ ಮಾಡುತ್ತಿದ್ದನೋ ಅಷ್ಟೇ ಸಾವಧಾನದಿಂದ ತನ್ನ ಆಡುಗೆ ಮಾಡುವ ಹಿತ್ತಾಳೆ ಪಾತ್ರೆಗಳನ್ನು ಫಳ ಫಳನೆಹೊಳೆಯುವ ಚಿನ್ನದಂತೆ ತೊಳೆದಿಡುತ್ತಿದ್ದನು.

- ಸ್ವಾಮಿ ವಿವೇಕಾನಂದ
ದಯವಿಟ್ಟು ನಿಮ್ಮ ಅಬಿಪ್ರಾಯ ಬರೆಯಿರಿ  

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ